DAKSHINA KANNADA
ಕುಕ್ಕೆ ಸುಬ್ರಹ್ಮಣ್ಯ ದ ಆನ್ ಲೈನ್ ಸೇವೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಗೆ ಕೊಕ್
ಪುತ್ತೂರು ಜೂನ್ 20: ಕುಕ್ಕೆ ಸುಬ್ರಹ್ಮಣ್ಯ ದ ಆನ್ ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ತಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ.
ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ತದ ಸೇವೆಗಳ ವಿಚಾರದಲ್ಲಿ ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ಸರಕಾರದ ಗಮನಕ್ಕೆ ಬಂದ ತಕ್ಷಣವೇ ಕುಕ್ಕೆ ಸುಬ್ರಹ್ಮಣ್ಯಯ ಸೇವೆಯನ್ನು ಸಂಸ್ಥೆಯಿಂದ ಕೈಬಿಡಲಾಗಿದೆ.
ಈ ಸಂಸ್ಥೆಯು ಎಲ್ಲಾ ದೇವಸ್ಥಾನಗಳ ಆನ್ ಲೈನ್ ಸೇವೆಯನ್ನು ಉಚಿತವಾಗಿ ನಿರ್ವಹಿಸುತ್ತಿದ್ದ ಸರಕಾರ ಯಾವುದೇ ವೆಚ್ಚವನ್ನು ಸಂಸ್ಥೆಗೆ ನೀಡುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಮುಜರಾಯಿ ಇಲಾಖೆ ತನ್ನದೇ ಹೊಸದಾದ ಸಾಫ್ಟ್ವೇರ್ ಅಭಿವೃದ್ಧಿಪಡಿಸುತ್ತಿದ್ದು, ಈ ಕಾರ್ಯ ಮುಂದಿನ ಎರಡು ತಿಂಗಳಲ್ಲಿ ಮುಗಿಯಲಿದೆ. ಆ ಬಳಿಕ ಇಲಾಖೆಯೇ ಎಲ್ಲಾ ದೇವಾಲಯಗಳ ಆನ್ ಲೈನ್ ಸೇವೆಗಳನ್ನು ನಿರ್ವಹಿಸಲಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
You must be logged in to post a comment Login