Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನ ಸಾಗರ…

ಪುತ್ತೂರು ಡಿಸೆಂಬರ್ 6: ವಾರದ ರಜೆ ಹಿನ್ನಲೆ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಇಂದು ಭಾರೀ ಪ್ರಮಾಣದಲ್ಲಿ ಜನ ಸೇರಿದ್ದು, ಆಶ್ಲೇಷ ಪೂಜೆ ನಡೆಸಲು ನಾಡಿನ ವಿವಿಧೆಡೆಯಿಂದ ಭಕ್ತರ ಜನಸಾಗರವೇ ಹರಿದು ಬಂದಿದೆ.


ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ‌ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *