Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್

    ಪುತ್ತೂರು ಡಿಸೆಂಬರ್ 27: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

    ಅಬ್ದುಲ್‌ ನಜೀರ್‌ ಮೂಲತ: ಕರಾವಳಿಯವರು. ಬೆಳುವಾಯಿ, ಮೂಡುಬಿದಿರೆ ಪರಿಸರದಲ್ಲಿ ಬೆಳೆದಿದ್ದಾರೆ. ಮೂಡುಬಿದಿರೆ ಕಡಲಕೆರೆ ಸಂತ ಇಗ್ನೇಶಿಯಸ್ ಹಿರಿಯ ಪ್ರಾಥಮಿಕ ಶಾಲೆ, ಜೈನ್ ಹೈಸ್ಕೂಲ್ ಮತ್ತು ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಹಾಗೂ ಮುಂದೆ ಮಂಗಳೂರಿನ ಎಸ್‍ಡಿಎಂ ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದ್ದರು.

    ಇಂದು ಮುಂಜಾನೆಯೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ನಂತರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಒಂದು ವಾರಗಳ ಕಾಲ ದಕ್ಷಿಣಕನ್ನಡ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply