Connect with us

DAKSHINA KANNADA

ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಪುತ್ತೂರು ಜುಲೈ 14: ದಕ್ಷಿಣಕನ್ನಡದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.


ಕಳೆದ ನಾಲ್ಕು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಘಟ್ಟ ಪ್ರದೇಶಗಳಲ್ಲಿ ಮಳೆ ಹೆಚ್ಚಾದ ಈ ಹಿನ್ನಲೆ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಬಂದಿರುವ ಭಕ್ತಾದಿಗಳು ಕುಮಾರಧಾರಾ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಸ್ನಾನಘಟ್ಟದ ಬಳಿಯಿರುವ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ.


ಇನ್ನು ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಹವಮಾನ ಇಲಾಖೆ ನೀಡಿದ್ದು, ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *