LATEST NEWS
3 ಕೋಟಿಗೂ ಅಧಿಕ ಬಾಡಿಗೆ ಹಣ ಬಾಕಿ, ಕುಕ್ಕೆ ದೇವಸ್ಥಾನದ ಇಬ್ಬರು ನೌಕರರ ಅಮಾನತು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ
ಸುಬ್ರಹ್ಮಣ್ಯ ಜೂ.11: ದೇವಸ್ಥಾನದ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಹಿನ್ನಲೆ ಇಬ್ಬರು ದೇವಸ್ಥಾನದ ನೌಕರರನ್ನು ಅಮಾನತು ಮಾಡಿರುವ ಘಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂಬುದು ತಿಳಿದು ಬಂದಿದೆ.
ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು, ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು ಲೋಕೇಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಇನ್ನೊಂದು ಕಡೆಯಿಂದ ಬೇರೆಯವರು ಮಾಡಿದ ತಪ್ಪಿಗೆ ನೌಕರರನ್ನು ಬಲಿ ಪಡೆಯಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಮಧ್ಯೆ ದೇಗುಲಕ್ಕೆ ಸಂಬಂಧಿಸಿದ ಅಂಗಡಿಯನ್ನು ಬಾಡಿಗೆ ಪಡೆದು ಕೋಟಿಗೂ ಮಿಕ್ಕಿ ಬಾಡಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿರುವವರ ಮೇಲೆ ಪೊಲೀಸ್ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ಬರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಸಂಪೂರ್ಣ ಬಾಡಿಗೆ ಹಣ ವಸೂಲಿ ಆಗುವವರೆಗೆ ನೌಕರರ ಮರು ನಿಯುಕ್ತಿ ಮಾಡಬಾರದೆಂದು ಆದೇಶಿಸಿದ್ದಾರೆ.
You must be logged in to post a comment Login