LATEST NEWS
ಕರೋನಾ ಭೀತಿ ಕುಕ್ಕೆ ಸುಬ್ರಹ್ಮಣ್ಯದ ಪೂಜೆಗಳಲ್ಲಿ ತಲಾ ಇಬ್ಬರಿಗೆ ಮಾತ್ರ ಅವಕಾಶ
ಕರೋನಾ ಭೀತಿ ಕುಕ್ಕೆ ಸುಬ್ರಹ್ಮಣ್ಯದ ಪೂಜೆಗಳಲ್ಲಿ ತಲಾ ಇಬ್ಬರಿಗೆ ಮಾತ್ರ ಅವಕಾಶ
ಸುಳ್ಯ ಮಾರ್ಚ್ 15:ಕರೋನಾ ಭೀತಿ ಧಾರ್ಮಿಕ ಕೇಂದ್ರಗಳ ಮೇಲೂ ಬಿದ್ದಿದ್ದು, ದ.ಕ ಜಿಲ್ಲೆಯ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿಯೇ ದೇವಸ್ಥಾನದ ಆಡಳಿತ ಮಂಡಳಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ಇಷ್ಟು ದಿನ ಕುಟುಂಬ ಸದಸ್ಯರು ಪಾಲ್ಗೊಳ್ಳುತ್ತಿದ್ದರು. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಲಾ ಇಬ್ಬರಂತೆ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.
ಕೊರೊನಾ ವೈರಸ್ ಭೀತಿಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಆದರೆ ಹೊರ ರಾಜ್ಯದಿಂದ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
You must be logged in to post a comment Login