Connect with us

    LATEST NEWS

    ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕನ ನೆರವಿಗೆ ನಿಂತ ಗುರುಬೆಳದಿಂಗಳು ಫೌಂಡೇಷನ್’

    ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಇತ್ತಿಚೆಗೆ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ಗುರುಬೆಳದಿಂಗಳು ಫೌಂಡೇಷನ್’ ಮುಂದಾಗಿದೆ.


    ಗುರು ಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಅವರು, ಘಟನೆ ನಡೆದ ಮರುದಿನವೇ ಆಸ್ಪತ್ರೆಗೆ ಭೇಟಿ ನೀಡಿ, ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿಯವರ ಕುಟುಂಬದವರನ್ನು ಪದ್ಮರಾಜ್‌ ಅವರು ಇತ್ತೀಚೆಗೆ ಭೇಟಿಯಾಗಿದ್ದರು. ‘ಮನೆಯನ್ನು ದುರಸ್ತಿಗೊಳಿಸಲು ಪುರುಷೋತ್ತಮ ಅವರು ನಿರ್ಧರಿಸಿದ್ದರು. ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ’ ಎಂದು ಕುಟುಂಬದ ಸದಸ್ಯರು ನೋವು ತೋಡಿಕೊಂಡಿದ್ದರು.

    ‘ಗುರುಬೆಳದಿಂಗಳು ಫೌಂಡೇಷನ್’ ವತಿಯಿಂದ ಮನೆಯನ್ನು ನಿರ್ಮಿಸಿಕೊಡುವ ಭರವಸೆಯನ್ನು ಪದ್ಮರಾಜ್‌ ನೀಡಿದ್ದರು. ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ್ದರು. ಪುರುಷೋತ್ತಮ ಪೂಜಾರಿ ಅವರ ಮನೆಗೆ ಪದ್ಮರಾಜ್ ಭಾನುವಾರ ಭೇಟಿ ನೀಡಿ ಅವರ ಕುಟುಂಬ ಸದಸ್ಯರ ಜೊತೆ ಮನೆ ನವೀಕರಣದ ಕುರಿತು ಚರ್ಚಿಸಿದರು. ಮುಂದಿನ ವಾರದಿಂದ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply