Connect with us

DAKSHINA KANNADA

ಫೆಬ್ರವರಿ 1 ರಿಂದ ಕುಮಾರ ಪರ್ವತ ಚಾರಣ ಬಂದ್..!!

ಸುಬ್ರಹ್ಮಣ್ಯ ಜನವರಿ 30: ಅತಿಯಾದ ಚಾರಣಿಗರು ಹಾಗೂ ಬೆಸಿಗೆ ಪ್ರಾರಂಭದ ಹಿನ್ನಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.


ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿ ಅನಾಹುತಗಳಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರ ಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.


ಜ.26ರಂದು, ಒಂದೇ ದಿನದಲ್ಲಿ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು ಕುಮಾರ ಪರ್ವತಾರೋಹಣ ಮಾಡಿದ್ದರು. ಇದು ಪರಿಸರವಾದಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಮುಂದಿನ ಸಲ ಆನ್ ಲೈನ್ ಬುಕ್ಕಿಂಗ್ ಮಾಡುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *