Connect with us

DAKSHINA KANNADA

ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಪುತ್ತೂರು ಜುಲೈ 15: ಕರಾವಳಿ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಹರಿಯುವ ನದಿಗಳು ತುಂಬಿದ್ದು, ಅಪಾಯಮಟ್ಟಕ್ಕೆ ಆಗಮಿಸಿದೆ. ಇನ್ನು ಈ ಬಾರಿ ಮಳೆಯ ಅಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಎರಡನೇ ಬಾರಿ ಮುಳುಗಡೆಯಾಗಿದೆ.


ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಮಾನ ಇಲಾಖೆ ಬಾರಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಿದೆ. ಈ ನಡುವೆ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ನದಿಗಳು ತುಂಬಿ ಹರಿಯುತ್ತಿದೆ. ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಹಿನ್ನಲೆ ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ತೊಂದರೆಯಾಗಿದ್ದು, ನದಿ ನೀರನ್ನು ಡ್ರಮ್ ಮೂಲಕ ಸಂಗ್ರಹಿಸಿ ಭಕ್ತರಿಗೆ ತೀರ್ಥಸ್ನಾನಕ್ಕೆ ಅವಕಾಶ ನೀಡಲಾಗಿದೆ. ಇನ್ನು ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ನದಿ ಪಾತ್ರಕ್ಕೆ ಭಕ್ತಾಧಿಗಳು ತೆರಳದಂತೆ ಕ್ಷೇತ್ರದ ವತಿಯಿಂದ ಸೂಚನೆ ನೀಡಲಾಗಿದ್ದು, ಸ್ನಾನಘಟ್ಟದ ಬಳಿ ಹೋಮ್ ಗಾರ್ಡ್ ಮತ್ತು ದೇವಸ್ಥಾನದ ಸೆಕ್ಯುರಿಟಿಗಳ ನೇಮಕ ಮಾಡಲಾಗಿದೆ.


ಇನ್ನು ಕುಮಾರಧಾರಾ ನದಿ ತುಂಬಿ ಹರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ದೇವರ ಮೀನುಗಳು ಆಗಮಿಸಿದೆ. ಈ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳು ಸ್ನಾನಘಟ್ಟದ ಬಳಿ ಬಂದ ದೇವರ ಮೀನುಗಳಿಗೆ ಆಹಾರ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *