Connect with us

    LATEST NEWS

    ಮಂಗಳೂರು ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

    ಮಂಗಳೂರು ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

    ಮಂಗಳೂರು ಸೆಪ್ಟೆಂಬರ್ 23:ಪ್ರಸಿದ್ದ ಮಂಗಳೂರು ದಸರಾವನ್ನು ಈ ಬಾರಿ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

    ಈ ಬಾರಿ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 10ರಿಂದ 19ರವರೆಗೆ ನಡೆಯಲಿದ್ದು, ದಸರಾ ಮಹೋತ್ಸವ ಉದ್ಘಾಟನಾ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅಕ್ಟೋಬರ್ 10ರಂದು ದೇವಾಲಯದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಅಕ್ಟೋಬರ್ 19ರಂದು ವೈಭವದ ಶೋಭಾ ಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಮಂಗಳೂರು ದಸರಾ ಮಹೋತ್ಸವದ 9 ದಿನ ನಾನಾ ಕ್ಷೇತ್ರದ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಪ್ರತಿದಿನವೂ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ, ದೇಶದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಧ್ಯಾಹ್ನ ಅನ್ನದಾನ ನಡೆಯಲಿದೆ ಎಂದು ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply