Connect with us

    LATEST NEWS

    ಕುಂಪಲ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

    ಉಳ್ಳಾಲ ಮಾರ್ಚ್ 25: ಯುವಕನೋಬ್ಬ ಮನೆಯ ಕಿಟಿಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಎಂದು ಗುರುತಿಸಲಾಗಿದ್ದು, ಈತ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ.

    ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply