LATEST NEWS
ಕುಂದಾಪುರ: ತೀರ್ಥಯಾತ್ರೆ ಹೋಗಿದ್ದ ಕುಟುಂಬ, ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ.
ಶ್ರೀದೇವಿ ನಿಲಯದ ಮಂಜುನಾಥ ಜೋಗಿ ಮತ್ತು ಮನೆಯವರು ಕುಟುಂಬ ಸಹಿತ ಪಂಡರಾಪುರ ಹಾಗೂ ಶಿರ್ಡಿಗೆ ತೀರ್ಥಯಾತ್ರೆಗೆಂದು ಜುಲೈ 29ರಿಂದ ಆಗಸ್ಟ್ 5 ತೆರಳಿದ್ದರು. ಶುಕ್ರವಾರ ಮನೆಗೆ ವಾಪಸ್ಸಾದ ಕುಟುಂಬಕ್ಕೆ ಮನೆಯಲ್ಲಿ ಹಿಂಬದಿ ಬಾಗಿಲು ಒಡೆದಿರುವುದು ಗೊತ್ತಾಗಿದೆ.
ಬಳಿಕ ಒಳ ಬಂದು ನೋಡಿದರೆ ಕಪಾಟಿನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕಪಾಟಿನಲ್ಲಿದ್ದ ೮ ಗ್ರಾಂ ಚಿನ್ನದ ಬ್ರಾಸ್ಲೆಟ್, 12 ಗ್ರಾಂನ ಚಿನ್ನದ ಸರ, 4 ಗ್ರಾಂನ ಉಂಗುರ, 3 ಗ್ರಾಂನ ಉಂಗುರ ಸೇರಿದಂತೆ ಒಟ್ಟು 1.20ಲಕ್ಷ ರೂ. ಮೌಲ್ಯದ 27 ಗ್ರಾಂ ಚಿನ್ನಾಭರಣ, 13500 ರೂ. ನಗದು ಕಳವಾಗಿತ್ತು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login