LATEST NEWS
ಕುಂದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ.
ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ ಭುಜಂಗ ಶೆಟ್ಟಿ (58) ಮೃತ ದುರ್ದೈವಿ. ಮನೆಯ ತೋಟದ ಅಡಿಕೆ ಕೊಯ್ಯಲು ಹಾಗೂ ಅಡಿಕೆ ಗರಿಗಳನ್ನು ಕತ್ತರಿಸಲು ಭುಜಂಗ ಶೆಟ್ಟಿ ತೆರಳಿದ್ದು ಉದ್ದದ ಕಬ್ಬಿಣದ ಕೊಕ್ಕೆ ಮೂಲಕ ಕೆಲಸ ಮಾಡುತ್ತಿರುವಾಗ ತೋಟದಲ್ಲಿ ಹಾದುಹೋದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗಂಗೊಳ್ಳಿ ಪೊಲೀಸರು ಸ್ಥಳಲ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
You must be logged in to post a comment Login