Connect with us

    LATEST NEWS

    ಕುಂದಾಪುರ: ಖಾಸಗಿ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು

    ಕುಂದಾಪುರ, ಜುಲೈ 23: ನಗರದ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನೆಲ್ಯಾಡಿ ಮೂಲದ ಆನಂದ ನೇಣಿಗೆ ಶರಣಾದ ಉಪನ್ಯಾಸಕ. ಕುಂದಾಪುರ ಅಂಕದಕಟ್ಟೆ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆಯಾಗಿದೆ.

    ಎರಡು ತಿಂಗಳ ಹಿಂದೆ ಆನಂದ್‌ ಮದುವೆಯಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply