Connect with us

KARNATAKA

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರ ಪಾಲು, ಓರ್ವನ ಶವ ಪತ್ತೆ, ಮತ್ತೋರ್ವ ನಾಪತ್ತೆ..!!

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಇಂದು  ಶನಿವಾರ ಬೆಳಿ್ಗ್ಗೆ ಉಡುಪಿ ಕುಂದಾಪುರದ  ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.

ಸಮುದ್ರಪಾಲಾದವರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.ಮೃತನನ್ನು ಕುಂದಾಪುರ ಮೂಲದ ಅಜಯ್ ಎಂದು ಗುರುತಿಸಲಾಗಿದೆ.  ಬೆಂಗಳೂರು ದಾಸರಹಳ್ಳಿ ನಿವಾಸಿ ಸಂತೋಷ್ ನೀರುಪಾಲಾಗಿದ್ದು ಈತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇವರೊಂದಿಗೆ ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನ ದಾಸರ ಹಳ್ಳಿಯಿಂದ  ಕುಂದಾಪುಕ್ಕೆ ಬಂದಿದ್ದು‌, ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ‌

 

ಬೆಳಗ್ಗೆ ಸಮುದ್ರಕ್ಕಿಳಿದಿದ್ದ ಸಂದರ್ಭ ಈ ದುರ್ಘಟನೆ  ಸಂಭವಿಸಿದೆ. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *