Connect with us

LATEST NEWS

ಕುಂದಾಪುರ – ಬೈಕ್ ಗೆ ಲಾರಿ ಡಿಕ್ಕಿ – ಕೆನರಾ ಬ್ಯಾಂಕ್ ಮ್ಯಾನೇಜರ್ ಸಾವು

ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ.


ಮೃತರನ್ನು ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಮಹಾರಾಷ್ಟ್ರದ ನವಿ ಮುಂಬೈ ನಿವಾಸಿ ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ರಾಹುಲ್ ಅವರನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ದಾರಿ ಮಧ್ಯೆ ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಅಪಘಾತ ನಡೆಸಿದ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಸ್ಥಳೀಯರು ಲಾರಿಯನ್ನು ಬೆನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಗೊಳ್ಳಿ ಠಾಣೆ ಎಸ್‌ಐ ಹರೀಶ್‌ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *