Connect with us

LATEST NEWS

ಕುಂದಾಪುರ – ಹೆಜ್ಜೇನು ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕುಂದಾಪುರ ಡಿಸೆಂಬರ್ 21: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಬಸ್ರೂರಿನಲ್ಲಿ ನಡೆದಿದೆ.


ಮೃತರನ್ನು ಬಸ್ರೂರಿನ ನಿವಾಸಿ ಜಗಜೀವನ್ (76) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಇವರು ಮನೆಯಿಂದ ಬಸ್ರೂರಿನ ಬಸ್ ನಿಲ್ದಾಣ ಬಳಿ ಬರುವಾಗ ಹೆಜ್ಜೇನು ಹಿಂಡು ದಾಳಿ ನಡೆಸಿವೆ. ಬಸ್ ನಿಲ್ದಾಣ ಬಳಿಯಿದ್ದ ಹೆಜ್ಜೇನು ಹಿಂಡಿಗೆ ಯಾವುದೋ ಹಕ್ಕಿ ಬಡಿದ ಕಾರಣ ಹೆಜ್ಜೇನುಗಳು ಅದೇ ದಾರಿಯಲ್ಲಿ ಬರುತ್ತಿದ್ದ ಜಗಜೀವನ್ ಅವರ ಮೇಲೆ ದಾಳಿ ನಡೆಸಿವೆ. ಏಕಕಾಲದಲ್ಲಿ ನೂರಾರು ಹೆಜ್ಜೇನುಗಳು ದಾಳಿ ನಡೆಸಿದ್ದರಿಂದ ಮುಖ, ದೇಹ, ಕೈ-ಕಾಲುಗಳೆಲ್ಲ ಊದಿಕೊಂಡು, ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *