Connect with us

    LATEST NEWS

    ಕುಂದಾಪುರ ಬನ್ಸ್ ರಾಘು ಕೊಲೆ ಪ್ರಕರಣ – ಇಬ್ಬರು ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ

    ಕುಂದಾಪುರ ಅಕ್ಟೋಬರ್ 06 : ಕುಂದಾಪುರದಲ್ಲಿ ನಡೆದ ರಾಘವೇಂದ್ರ ಶೇರುಗಾರ್ ಆಲಿಯಾಸ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಲಾಗಿದ್ದು, ಇಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.


    ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಎಂದು ಗುರುತಿಸಲಾಗಿದೆ. ಆರೋಪಿಗಳು ಕುಂದಾಪುರದ ಚಿಕ್ಕನ್‌ ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ (42) ಅಲಿಯಾಸ್ ಬನ್ಸ್ ರಾಘು ಎನ್ನುವರನ್ನು ಚೂರಿ ಇರಿದು ಕೊಲೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬನ್ಸ್ ರಘು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದರು.

    ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು ತದನಂತರ ಉಡುಪಿ ಎಸ್ಪಿ ಡಾ. ಅರುಣ್ ಕೆ. ಅವರು ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply