LATEST NEWS
ಹಿಜಬ್ ವಿವಾದ – ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿಗೆ ನಾಳೆ ರಜೆ
ಉಡುಪಿ: ಕುಂದಾಪುರದಲ್ಲಿ ಹಿಜಬ್ ವಿವಾದ ತಾರಕಕ್ಕೇರುತ್ತಿದ್ದಂತೆ ಇದೀಗ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ.
ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ಹೆಚ್ಚಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದ್ದು, ಈಗಾಗಲೇ ಹಿಜಬ್ ಗಾಗಿ ಒತ್ತಾಯಿಸಿ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದು, ನಾಳೆ ಮುಂದುವರೆಯುವ ಸಾಧ್ಯತೆ ಇತ್ತು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.
ಬೆಳಗ್ಗೆಯಿಂದ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿನ ಗೇಟ್ ಮುಂಭಾಗದಲ್ಲಿ ಓದುತ್ತಾ ಕೂತಿದ್ದು, ಓದಿನಲ್ಲಿ ಮಗ್ನರಾಗಿದ್ದಾರೆ. ಕೆಲ ಸಂಘಟನೆಗಳಿಂದ ಹಿಜಬ್ ಧಾರಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರು ಗೇಟ್ ಮುಂದೆಯೇ ಮಧ್ಯಾಹ್ನದ ಊಟ ಸೇವಿಸಿದ್ದರು. ನಂತರ ಕಾಲೇಜು ಬಿಟ್ಟ ಮೇಲೆ ಸಂಜೆ ಮನೆಗೆ ವಾಪಸ್ಸಾಗಿದ್ದಾರೆ.
You must be logged in to post a comment Login