LATEST NEWS
ಕುಂದಾಪುರ – ಲಾಡ್ಜ್ ಗೆ ಬಂದಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು…!!
ಉಪ್ಪುಂದ ಜುಲೈ 22 : ಹೋಟೆಲ್ ಗೆ ಬಂದಿದ್ದ ಅನ್ಯ ಕೋಮಿನ ಜೋಡಿಯನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಮಂಗಳೂರಿನ ಉಳ್ಳಾಲದಲ್ಲಿ ಗುಜರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಮೀರ್ ಆಲಿ ಎಂಬವರು ಎರ್ಟಿಕಾ ಕಾರಿನಲ್ಲಿ ಗುಜರಿ ಅಂಗಡಿಯಲ್ಲಿ ಕೆಲಸದಲ್ಲಿದ್ದ ಹಿಂದೂ ಧರ್ಮದ ಸುಮಾರು 28 ವರ್ಷದ ಯುವತಿಯೊಂದಿಗೆ ಉಪ್ಪುಂದದ ಪರಿಚಯ ಹೋಟೇಲ್ಗೆ ಬಂದಿದ್ದು ಲಾಡ್ಜ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಈ ವಿಚಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಗೊತ್ತಾಗಿ ಹೋಟೆಲ್ಗೆ ಬಂದಿದ್ದು, ಈ ವೇಳೆ ಗಲಾಟೆ ಆರಂಭವಾಗಿದೆ. ಗಲಾಟೆ ನಡೆಯುತ್ತಿರುವುದು ಗಮನಕ್ಕೆ ಬಂದ ಕೂಡಲೇ ಜೋಡಿ ಕೋಣೆಯಿಂದ ಹೊರ ಬಂದು ಕಾರಿನಲ್ಲಿ ಹೊರಡಲನುವಾಗಿದ್ದಾರೆ. ಈ ಸಂದರ್ಭ ಹೊರಗಡೆ ಸೇರಿದ ಗುಂಪು ಗಲಾಟೆ ನಡೆಸಿದೆ. ಬಳಿಕ ಪೊಲೀಸರಿಗೆ ಸುದ್ಧಿ ಮುಟ್ಟಿ ಪೊಲೀಸರು ಜೋಡಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಯುವತಿ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು ಎಂದು ಹೇಳಲಾಗಿದ್ದು, ಆಕೆಯ ಒಪ್ಪಿಗೆಯಿಂದಲೇ ಬಂದಿದ್ದಾಳೆ ಎಂದು ತಿಳಿದು ಬಂದಿದೆ.
You must be logged in to post a comment Login