LATEST NEWS
ಕುಂದಾಪುರ – ಚೂರಿ ಇರಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಶೇರೆಗಾರ್ ಸಾವು
ಉಡುಪಿ ಅಕ್ಟೋಬರ್ 02: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ನಿನ್ನೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ ಕುಂದಾಪುರದ ಚಿಕ್ಕಮ್ಮನ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರಿಗೂ ಹಾಗೂ ಮತ್ತೊಂದು ವ್ಯಾಗನರ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಯೊಂದಿಗೆ ಯಾವುದೇ ವಿಚಾರಕ್ಕೆ ಗಲಾಟೆಯಾಗಿತ್ತು.
ಈ ವೇಳೆ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಚೂರಿ ತೆಗೆದು ರಾಘವೇಂದ್ರ ಅವರ ತೊಡೆಗೆ ಇರಿದು ಪರಾರಿಯಾಗಿದ್ದ, ಗಂಭೀರಗೊಂಡಿದ್ದ ರಾಘುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ ಬಳಿಕ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಪೂರ್ವ ದ್ವೇಷದಿಂದಲೇ ರಾಘು ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆರೋಪಿ ಶಿವಮೊಗ್ಗ ಮೂಲದವನು ಎಂದು ತಿಳಿದುಬಂದಿದೆ. ಸದ್ಯ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
You must be logged in to post a comment Login