Connect with us

    LATEST NEWS

    ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ಪ್ರಕರಣ ನಾಲ್ವರು ಆರೋಪಿಗಳ ಬಂಧನ

    ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ಪ್ರಕರಣ ನಾಲ್ವರು ಆರೋಪಿಗಳ ಬಂಧನ

    ಉಡುಪಿ ಅಕ್ಟೋಬರ್ 14: ವಿನಯ್ ಗುರೂಜಿ ಚಿತ್ರನಟ ಸುದೀಪ್ ಕುರಿತಾದ ಹೇಳಿಕೆ ವಿರೋಧಿಸಿದ್ದ ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಕುಂದಾಪುರ ಚಿಕನ್‌ಸಾಲ್ ರೋಡ್ ನಿವಾಸಿ ಗುರುರಾಜ್ ಪುತ್ರನ್(28), ಚಿಕನ್‌ಸಾಲ್ ಹೆಬ್ಬಾಗಿಲು ಮನೆ ನಿವಾಸಿ ಸಂತೋಷ (30), ಚಿಕನ್‌ಸಾಲ್ ರೋಡ್, ಕಸಬಾ ಗ್ರಾಮದ ಪ್ರದೀಪ್(29), ರವಿರಾಜ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

    ಕಳೆದ ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ವಿನಯ್ ಗುರೂಜಿ ನಟ ಸುದೀಪ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿತ್ತು. ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಬಂದ ಸಂದೇಶವನ್ನು ರತ್ನಾಕರ್ ಅವರು ಪೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು. ಇದರಿಂದ ಕೋಪಗೊಂಡಿದ್ದ ಎಂಟು, ಹತ್ತು ಮಂದಿ ಆರೋಪಿಗಳು ಅಕ್ಟೋಬರ್ 13ರಂದು ಕುಂದಾಪುರ ಸಂಗಮ್ ಶಾಲೆ ಬಳಿ ರತ್ನಾಕರ್ ಅವರಿಗೆ, ‘ನಮ್ಮ ವಿನಯ್ ಗುರೂಜಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನ ಮಾಡುತ್ತಿಯಾ’ ಎಂದು ಅವಾಚ್ಯ ಶಬ್ದಗಳಿಂದ ಬೈದು, ಬೈಕ್‌ನ ಬಂಪರ್‌ಗೆ ಅಳವಡಿಸುವ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದರು.

    ಪ್ರಕರಣದ ಬೆನ್ನತ್ತಿದ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಉಳಿದ ಆರೋಪಿಗಳ ಬಂಧನಕ್ಕೆ 2 ತಂಡಗಳನ್ನು ರಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply