Connect with us

    LATEST NEWS

    ಕುಂದಾಪುರ – ವಿಧ್ಯಾರ್ಥಿನಿಯರಿಗೆ ಅಶ್ಲೀಲ ಮೇಸೆಜ್ ಕಾಲೇಜು ಪಿಆರ್ ಓ ವಿರುದ್ದ ವಿಧ್ಯಾರ್ಥಿಗಳಿಂದ ಪ್ರತಿಭಟನೆ

    ಕುಂದಾಪುರ ಫೆಬ್ರವರಿ24: ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯೊಬ್ಬರು ಕಾಲೇಜಿನ ವಿಧ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿದ ಆರೋಪದ ಮೇಲೆ ಕುಂದಾಪುರ ಬಿಬಿ ಹೆಗ್ಡೆ ಕಾಲೇಜಿನ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.


    ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳಿಸುತ್ತಿದ್ದಾರೆಂದು ಆರೋಪಿಸಿದ ವಿಧ್ಯಾರ್ಥಿನಿಯರು ಈ ಕುರಿತಂತೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಶಿಸ್ತು ಕ್ರಮ ಜರುಗಿಸದೆ ಆಡಳಿತ ಸುಮ್ಮನಿದೆ ಎಂದು ಆರೋಪಿಸಿದ್ದಾರೆ.


    ಈ ಹಿನ್ನಲೆ ಇಂದು ಕಾಲೇಜಿನ ವಿದ್ಯಾರ್ಥಿಗಳಿಂದ ಕಾಲೇಜು ಮುಂಭಾಗ ಧರಣಿ, ಪಿಆರ್ ಓ‌ ವಿರುದ್ದ ಆಕ್ರೋಶ ಹೊರಹಾಕಿ, ವಜಾಕ್ಕೆ ಆಗ್ರಹಿಸಿದ್ದಾರೆ.


    ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ ಕಾಲೇಜು ಪ್ರಾಂಶುಪಾಲ ಉಮೇಶ್, ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದರು, ಆದರೆ ಪಿಆರ್ ಓ ಅನ್ನು ಸ್ಥಳಕ್ಕೆ‌ ಕರೆಸಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು, ಬಿಸಿಲನ್ನೂ ಲೆಕ್ಕಿಸದೇ ಸ್ಥಳದಲ್ಲೇ ಧರಣಿ ಕುಳಿತ ವಿದ್ಯಾರ್ಥಿಗಳು, ಕಾಲೇಜು ಆಡಳಿತ‌ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ‌ ಕರೆಸುವಂತೆ‌ ಪಟ್ಟು ಹಿಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply