LATEST NEWS
ಓರ್ವನ ಕೊಲೆಯಲ್ಲಿ ಅಂತ್ಯವಾದ ಕಾರ್ಮಿಕರ ಹೊಡೆದಾಟ ….!!

ಸುರತ್ಕಲ್ ಫೆಬ್ರವರಿ 13 : ಮಾರ್ಬಲ್ ಅಂಗಡಿಯೊಂದರ ಕಾರ್ಮಿಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ವರದಿಯಾಗಿದೆ.
ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದ್ದು, ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಅದು ಅತಿರೇಕಕ್ಕೆ ತೆರಳಿ ಹೊಡೆದಾಡಿಕೊಂಡಿದ್ದರು ಎನ್ನಲಾಗಿದೆ. ಹೊಡೆದಾಟದಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದಿದ್ದಾರೆ.