LATEST NEWS
ಲೇಡಿಸ್ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಬಿತ್ತು ಧರ್ಮದೇಟು
ಮಂಗಳೂರು: ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ.
ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಮರುದಿನವೇ ಆತನನ್ನು ಬಿಟ್ಟು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ನಿನ್ನೆ ತಡರಾತ್ರಿಯೂ ಏಕಾಏಕಿ ವಿಕೃತಕಾಮಿ ಯುವತಿಯೊಬ್ಬಳ ರೂಮ್ ಪ್ರವೇಶಿಸಿ ಆಕೆಯ ಬಟ್ಟೆಯನ್ನು ಟೆರೇಸ್ ಮೇಲೆ ಕೊಂಡೊಯ್ದು ಇಟ್ಟಿದ್ದ. ಇದು ಗಮನಕ್ಕೆ ಬಂದು ಎಲ್ಲ ಯುವತಿಯರು ಹುಡುಕಾಟ ನಡೆಸಿದ್ದು ಈ ವೇಳೆ ಆತ ಟೆರೇಸ್ ಮೇಲೆ ಪತ್ತೆಯಾಗಿದ್ದಾನೆ. ಹಾಗೇ ಸಿಕ್ಕಿದವನಿಗೆ ಯುವತಿಯರೇ ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವತಿಯರ ಧರ್ಮದೇಟಿಗೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ಕೇರಳ ಮೂಲದ ಆರೋಪಿ ವಿಕೃತ ಚೇಷ್ಟೆಯಿಂದಾಗಿ ಪಿಜಿ ಯುವತಿಯರು ಭಯಬಿದ್ದಿದ್ದಾರೆ. ಈ ಹಿಂದೆ ಎರಡು ಬಾರಿ ಇಂತಹದ್ದೇ ಪ್ರಕರಣ ಜರುಗಿದ್ದರೂ ಪೊಲೀಸರು ಕಠಿಣ ಕ್ರಮ ಜರುಗಿಸದೇ ಇರುವುದು ಮತ್ತೊಮ್ಮೆ ಘಟನೆ ಮರುಕಳಿಸಲು ಕಾರಣ ಎಂದು ಯುವತಿಯರು ದೂರಿದ್ದಾರೆ.
You must be logged in to post a comment Login