Connect with us

    LATEST NEWS

    ಯುವತಿ ಆತ್ಮಹತ್ಯೆ : ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ದ ಕಿರುಕುಳದ ಆರೋಪ

    ಮಂಗಳೂರು, ಸೆಪ್ಟೆಂಬರ್ 12 : ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಉಳ್ಳಾಲ ಸೋಮೇಶ್ವರ ಉಚ್ಚಿಲದಲ್ಲಿ ಸಂಭವಿಸಿದೆ.

    21 ವರ್ಷದ ಸ್ಪೂರ್ತಿಯೇ ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪೂರ್ತಿ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಒಂದುವರೆ ತಿಂಗಳ ಹಿಂದೆ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದಳು. ಆಸ್ಪತ್ರೆಯ ಇನ್ಸೂರೆನ್ಸ್ ವಿಭಾಗಲ್ಲಿ ಕೆಲಸ ಮಾಡುತ್ತಿದ್ದಳು. ಆಸ್ಪತ್ರೆಯ ಆಡಳಿತ ಮಂಡಳಿಯ ಕಿರುಕುಳವೇ ಸ್ಪೂರ್ತಿ ಅವರು ಆತ್ಮಹತ್ಯೆಗೆ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

    ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಸ್ಪೂರ್ತಿ ಪೋಷಕರು ದೂರು ದಾಖಲಿಸಿದ್ದಾರೆ. ಆತ್ಮಹತ್ಯೆ ಘಟನೆಯ ಬಳಿಕ ಸೌಜನ್ಯಕ್ಕಾದರೂ ಯುನಿಟಿ ಆಸ್ಪತ್ರೆಯ ಆಡಳಿತ ಮಂಡಳಿ ಮನೆಯವರನ್ನು, ಪೋಷಕರನ್ನಾಗಲಿ ಭೇಟಿ ಮಾಡಿಲ್ಲ ಎಂದು ಸ್ಪೂರ್ತಿ ಅವರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply