UDUPI
ಗುಣಾತ್ಮಕ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಆದ್ಯತೆಯಾಗಬೇಕು – ಲಾಲಾಜಿ ಆರ್. ಮೆಂಡನ್
ಗುಣಾತ್ಮಕ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಆದ್ಯತೆಯಾಗಬೇಕು – ಲಾಲಾಜಿ ಆರ್. ಮೆಂಡನ್
ಉಡುಪಿ, ಜುಲೈ 31 : ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ನಿಟ್ಟನಲ್ಲಿ ಗುಣಾತ್ಮಕ ಶಿಕ್ಷಣ ಪಡೆಯುವುದನ್ನು ತಮ್ಮ ಆದ್ಯತೆಯಾಗಿಸಿಕೊಳ್ಳಬೇಕು. ಪಠ್ಯ ವಿಷಯಗಳಲ್ಲಿ ಉತ್ತಮ ಸಾಧನೆ ತೋರುವುದರ ಜೊತೆಗೆ ಪ್ರಜಾವಂತಿಕೆ, ನಾಯಕತ್ವಗುಣ ಮೊದಲಾದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಿರಿಯಡಕದ ಗಣೇಶಕಲಾ ಮಂದಿರದಲ್ಲಿ ನಡೆದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದ 2018-19ನೇ ಸಾಲಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯಅತಿಥಿಯಾಗಿದ್ದ ಉಡುಪಿಯ ಪೂರ್ಣಪ್ರಜ್ಞಾ ಇನ್ಸ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯ ಸ್ಥಾಪಕ ನಿರ್ದೇಶಕ ಎಂ.ಆರ್. ಹೆಗ್ಡೆ ತಮ್ಮ ದಿಕ್ಸೂಚಿ ಭಾಷಣದಲ್ಲಿ, ವಿದ್ಯಾರ್ಥಿ ಸಮೂಹವು ಸಮಾಜದ ಆಸ್ತಿಯಾಗಿದ್ದು, ಇಂದಿನ ಸಮಾಜಕ್ಕಾಗಿ ಕೌಶಲ್ಯಯುತವಾದ ಪ್ರಜ್ಞಾವಂತ ಯುವ ಸಮುದಾಯವನ್ನು ನಿರ್ಮಿಸುವ ಹೊಣೆ ಉಪನ್ಯಾಸಕರ ಮೇಲಿದೆ ಎಂದು ಹೇಳಿದರು.
ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಲಾಲಾಜಿ ಆರ್.ಮೆಂಡನ್, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂ.ಆರ್. ಹೆಗ್ಡೆ ಶಿಕ್ಷಣ ತಜ್ಞ ಹಾಗೂ ಕಾಲೇಜು, ಅಭಿವೃದ್ಧಿ ಸಮಿತಿಯ ಸದಸ್ಯ ಡಾ. ಎನ್. ಎಸ್. ಶೆಟ್ಟಿ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
You must be logged in to post a comment Login