Connect with us

    BANTWAL

    ಬಂಟ್ವಾಳ : ಗುಡ್ಡ ಕುಸಿದು 3 ಜನ ಕಾರ್ಮಿಕರ ಸಾವು ಓರ್ವ ಗಂಭೀರ

    ಬಂಟ್ವಾಳ : ಗುಡ್ಡ ಕುಸಿದು 3 ಜನ ಕಾರ್ಮಿಕರ ಸಾವು ಓರ್ವ ಗಂಭೀರ

    ಬಂಟ್ವಾಳ ಡಿಸೆಂಬರ್ 7: ಗುಡ್ಡ ಕುಸಿದು ಮೂರು ಮಂದಿ ಸಾವನ್ನಪ್ಪಿ ,ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಓಡಿಯೂರಿನಲ್ಲಿ ನಡೆದಿದೆ.

    ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಅಗೆಯಲಾಗುತ್ತಿತ್ತು. ಈ ವೇಳೆ ಗುಡ್ಡದ ಮೇಲ್ಭಾಗ ಏಕಾ ಏಕಿ ಕುಸಿದು ಬಿದ್ದಿದೆ. ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ನಾಲ್ಕು ಮಂದಿ ಕಾರ್ಮಿಕರು ಸಿಲುಕಿದ್ದು, ಮೂರು ಮಂದಿಯ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ.

    ಘಟನೆಯಲ್ಲಿ ಒರ್ವ ಕಾರ್ಮಿಕನ ರಕ್ಷಣೆ ಮಾಡಲಾಗಿದ್ದು, ಗಂಭೀರ ಗಾಯಗೊಂಡ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ರವರು, ಕಂದಾಯ ನಿರೀಕ್ಷಕರು ವಿಟ್ಲ, ಗ್ರಾಮಕರಣಿಕರು ಕರೋಪಾಡಿ ಗ್ರಾಮ, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮತ್ತು ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply