Connect with us

    LATEST NEWS

    ಮಂಗಳೂರು ಗುಡ್ಡ ಕುಸಿತ – ಮನೆಯಲ್ಲಿ ಮಲಗಿದ್ದ ಅಣ್ಣ-ತಂಗಿ ಏಳಲೇ ಇಲ್ಲ

    ಮಂಗಳೂರು ಜುಲೈ 5: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಭೂಕುಸಿತ ಸಂಭವಿಸಿದೆ. ನಾಲ್ಕು ಮನೆಗಳು ಮಣ್ಣಿನಡಿಗೆ ಬಿದ್ದು ನೆಲಸಮವಾಗಿದ್ದು ಇಬ್ಬರು ಮಕ್ಕಳು ಘಟನೆಯಲ್ಲಿ ಸಾವು ಕಂಡಿದ್ದಾರೆ. ಎನ್ ಡಿಆರ್ ಎಫ್ ತಂಡದ ಮಾರ್ಗದರ್ಶನದಲ್ಲಿ ನಾಲ್ಕು ಜೆಸಿಬಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು ನಾಲ್ಕು ಗಂಟೆಗಳ ಬಳಿಕ ಮಕ್ಕಳ ದೇಹವನ್ನು ಪತ್ತೆ ಮಾಡಿದೆ.

    ಸತತ ಐದು ಗಂಟೆಯಿಂದ ಎನ್‍ಡಿಆರ್‍ಎಫ್ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಇದೀಗ 16 ವರ್ಷದ ಅಣ್ಣ ಸಫ್ವಾನ್ ಹಾಗೂ 10 ವರ್ಷದ ತಂಗಿ ಸಹಲಾ ಇಬ್ಬರ ಮೃತ ದೇಹ ಪತ್ತೆಯಾಗಿವೆ.


    ಈ ಮನೆಯಲ್ಲಿ ಸುಮಾರು 6 ಜನ ವಾಸವಿದ್ದರು. ಗುಡ್ಡ ಕುಸಿಯುತ್ತಿರುವುದು ತಿಳಿಯುತ್ತಿದ್ದಂತೆ ಮನೆಯವರು ಹೊರಗಡೆ ಓಡಿ ಬಂದಿದ್ದಾರೆ. ಆದರೆ ಇಬ್ಬರು ಮಕ್ಕಳು ಮನೆಯಲ್ಲಿ ಮಲಗಿದ್ದರು. ಹೀಗಾಗಿ ಮನೆಯಲ್ಲೇ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.
    ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಆಗಮಿಸಿದ್ದು ಸಂತ್ರಸ್ತರಿಗೆ ತಾತ್ಕಾಲಿಕ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply