Connect with us

DAKSHINA KANNADA

ಸುಳ್ಯ : ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮೂವರು ಕಾರ್ಮಿಕರ ದುರ್ಮರಣ

ಸುಳ್ಯ ಮಾರ್ಚ್ 25: ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ.


ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ.


ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ, ಇದರಿಂದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಮಹಿಳೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಸದ್ಯ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ. ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಥಳಕ್ಕೆ ಶಾಸಕ ಅಂಗಾರ ಅವರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *