Connect with us

UDUPI

ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದುಬಿದ್ದು ಇಬ್ಬರ ಸಾವು

ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದುಬಿದ್ದು ಇಬ್ಬರ ಸಾವು

ಉಡುಪಿ ಫೆಬ್ರವರಿ 27: ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಕುಸಿದುಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಎಂಬಲ್ಲಿ ನಡೆದಿದೆ. ಕಾಪು ತಾಲೂಕು ಪುರಸಭಾ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಾಪು ಪೇಟೆಯಲ್ಲಿ ನೂತನ ಒಳಚರಂಡಿ ಕಾಮಗಾರಿಗಾಗಿ ಹೊಂಡ ತೋಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಘನವಾಹನ ಸಂಚಾರದ ಪರಿಣಾಮ ಮಣ್ಣು ಕುಸಿದು ಬಿದ್ದಿದೆ. ಈ ಹಿನ್ನಲೆಯಲ್ಲಿ ಮಣ್ಣಿನಡಿ ಇಬ್ಬರು ಕಾರ್ಮಿಕರಾದ ಚಿತ್ರದುರ್ಗ ಮೂಲದ ದಾಸಪ್ಪ ಹಾಗು ಉಮೇಶ್ ಸಿಲುಕಿದ್ದರು.

ಕೂಡಲೇ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಮಣ್ಣಿನಡಿಯಿಂದ ಕಾರ್ಮಿಕರನ್ನು ಹೋರತೆಗೆಯಲಾಯಿತು. ಗಂಭೀರವಾಗಿ ಗಾಯ ಗೊಂಡಿದ್ದ ಉಮೇಶ್ ಹಾಗು ದಾಸಪ್ಪ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *