Connect with us

UDUPI

ಉಡುಪಿ ವಿಧ್ಯಾರ್ಥಿ ಅಪಹರಣ :ಇಬ್ಬರ ಬಂಧನ

ಉಡುಪಿ, ಸೆಪ್ಟೆಂಬರ್ 4 : ಉಡುಪಿಯ ಕಾನೂನು ವಿದ್ಯಾರ್ಥಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕವನ್ ಶೆಟ್ಟಿ ಹಾಗು ವಿವೇಕ್ ಜಿ ಸುವರ್ಣ ಎಂದು ಗುರುತಿಸಲಾಗಿದೆ.

ಅಪಹರಣ ಪ್ರಕರಣ

28 ಲಕ್ಷ ರೂಪಾಯಿ ಅವ್ಯವಹಾರದ ವಿಚಾರದಲ್ಲಿ ಉಡುಪಿಯ ಕಾನೂನು ವಿದ್ಯಾರ್ಥಿ ವಿಜಯ ಕುಮಾರ್ ಎಂಬವರನ್ನು ಅಪಹರಣ ಮಾಡಲಾಗಿತ್ತು. ಕಾನೂನು ವಿಧ್ಯಾರ್ಥಿ ವಿಜಯ ಕುಮಾರ್ ಅವರನ್ನು ಅಪಹರಿಸಿ ತೀವ್ರ ಹಲ್ಲೆ ನಡೆಸಿದ ಬಳಿಕ ಉಡುಪಿಗೆ ವಾಪಸ್ ತಂದು ಬಿಡಲಾಗಿತ್ತು.

ಈ ಕುರಿತು ಆಗಸ್ಟ್ 31 ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಅಪಹರಣ ಪ್ರಕರಣದ ಕುರಿತು ತನಿಖೆ ನಡೆಸಿದ ಉಡುಪಿ ಪೊಲೀಸರು, ಪ್ರಕರಣದ ಪ್ರಮುಖ ಆರೋಪಿ ಗಳಾದ ಕವನ್ ಶಟ್ಟಿ, ಹಾಗು ವಿವೇಕ್ ಜಿ ಸುವರ್ಣ ಅವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪ್ರಕಾಶ್ ಮಲ್ಪೆ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುವ ತಲೆಮರೆಸಿಕೊಂಡಿರುವ 4 ಮಂದಿಯ ಬಂಧನಕ್ಕೂ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *