ಮಂಗಳೂರು ಅಗಸ್ಟ್ 1: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿದ್ದ ಈ ಕಾಮಗಾರಿಯಿಂದ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಉರ್ವ ಮೈದಾನದ ಅದೆಷ್ಟೋ ಪ್ರತಿಭೆಗಳು ತಮ್ಮ ಕ್ರೀಡಾ ಪ್ರತಿಭೆ ತೋರಲು ವೇದಿಕೆಯಾಗಿದೆ. ಹಾಗಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.
