Connect with us

    LATEST NEWS

    ಅದ್ಧೂರಿ ಹುಟ್ಟುಹಬ್ಬಕ್ಕೆ ನೋ ಅಂದ ಅಪ್ಪ, ಅಮ್ಮ – 21ರ ಯುವಕ ಆತ್ಮಹತ್ಯೆ

    ಚೆನ್ನೈ, ಆಗಸ್ಟ್ 12: ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅನುಮತಿ ಕೊಡಲಿಲ್ಲವೆಂದು 21 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ.

    ಕಿರ್ಗಿಸ್ತಾನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ (21) ರಜೆಯನ್ನು ಕಳೆಯಲು ತಮಿಳುನಾಡಿಗೆ ಬಂದಿದ್ದಾನೆ. ಈ ವೇಳೆ ಪೋಷಕರು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲು ಅವಕಾಶ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಕಿರ್ಗಿಸ್ತಾನ್‌ನಲ್ಲಿ 3ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ ರಜೆಯ ಮೇಲೆ ತಮಿಳುನಾಡಿಗೆ ಬಂದಿದ್ದನು. ಈ ವೇಳೆ ಅಪ್ಪ-ಅಮ್ಮನೊಂದಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಕೇಳಿದ್ದಾನೆ. ಅವರು ಅನುಮತಿ ನಿರಾಕರಿಸಿದ್ದರಿಂದ ನಿದ್ರೆ ಮಾತ್ರೆ ಸೇವಿಸಿದ್ದಾನೆ.

    ಕೆಲ ಸಮಯದ ಬಳಿಕ ಮಗನನ್ನು ನೋಡಿ ಬಳಿಕ ಅವನನ್ನು ವಿರುದುನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಳಿಸಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಮಧುರೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಮಧುರೈ ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply