ಪ್ರತಿಭಟನೆಯಲ್ಲಿ
ಕತುವಾ
ಸಂತ್ರಸ್ಥೆಯ ಭಾವಚಿತ್ರ ಪ್ರದರ್ಶನದ ವಿರುದ್ದ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ
ಉಡುಪಿ ಎಪ್ರಿಲ್ 22: ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯ ಗುರುತು ಬಹಿರಂಗ ಪಡಿಸುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ಅತ್ಯಾಚಾರ, ಮಹಿಳಾ ದೌರ್ಜನ್ಯ ಸಂತ್ರಸ್ಥೆಯ ಗುರುತನ್ನು ಬಹಿರಂಗಪಡಿಸುವಂತಿಲ್ಲ ಎಂದು ಅವರು ತಿಳಿಸಿದರು.
Table Of Content
ಈಗಾಗಲೇ ರಾಜ್ಯಾದ್ಯಂತ ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆಯುತ್ತಿದ್ದು, ಕರಾವಳಿಯಲ್ಲೂ ಕೂಡ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿವೆ. ಪ್ರತಿಭಟನೆಯ ಸಂದರ್ಭದಲ್ಲಿ ಕತುವಾ ಅತ್ಯಾಚಾರ ಸಂತ್ರಸ್ಥೆಯ ಭಾವಚಿತ್ರವನ್ನು ವಿವಿಧ ಸಂಘಟನೆಗಳು ಪ್ರದರ್ಶಿಸಿದ್ದರು.
ಈ ಕುರಿತಂತೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿಗಳು ಅತ್ಯಾಚಾರ ಸಂತ್ರಸ್ಥೆಯ ಬಾವಚಿತ್ರವನ್ನು ಪ್ರತಿಭಟನೆ ವೇಳೆ ಪ್ರದರ್ಶಿಸುವುದು ಕಾನೂನಿಗೆ ವಿರುದ್ದವಾಗಿದ್ದು, ಈ ರೀತಿ ಪ್ರದರ್ಶಿಸುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.