LATEST NEWS
ಮತ್ತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ…!!
ಚೆನ್ನೈ ಸೆಪ್ಟೆಂಬರ್ 24: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು. ಕಳೆದ ವಾರ ಎಸ್ಪಿ ಅವರ ಮಗ ಚರಣ್ ಅವರು ತಂದೆ ಗುಣಮುಖರಾಗಿದ್ದು, ಇನ್ನು ಕೆಲವೆ ದಿನಗಳಲ್ಲಿ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗುವುದು ಎಂದು ತಿಳಿಸಿದ್ದರು.
ಆದರೆ ಇತ್ತೀಚಿನ ಆಸ್ಪತ್ರೆಯ ಮಾಹಿತಿ ಪ್ರಕರಣ ಎಸ್ ಪಿಬಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ತೀವ್ರ ಗಂಭೀರ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯ ಪತ್ರಿಕಾ ಹೇಳಿಕೆಯ ಪ್ರಕಾರ, ಎಸ್ ಪಿಬಿ ಈಗ ಗರಿಷ್ಠ ಜೀವರಕ್ಷಕದಿಂದ ನೀಡಲಾಗುತ್ತಿದ್ದು. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಆರೋಗ್ಯ ಸ್ಥಿತಿ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಸೆಪ್ಟೆಂಬರ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್ ನಲ್ಲಿ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಇಸಿಎಂಓ ಮತ್ತು ಇತರ ಜೀವರಕ್ಷಕ ಕ್ರಮಗಳ ಮೇಲೆ ಯೇ ಉಳಿದಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ’ ಎಂದು ತಿಳಿಸಿದ್ದಾರೆ.
Facebook Comments
You may like
-
ಮೃತ ಆನೆಗೆ ಅರಣ್ಯಾಧಿಕಾರಿಯೊಬ್ಬರ ಕಣ್ಣೀರ ವಿದಾಯ…ಕಣ್ಣಲ್ಲಿ ನೀರು ತರಿಸುವ ವಿಡಿಯೋ
-
ತೆರಿಗೆ ವಂಚನೆ ಪ್ರಕರಣ Jesus Calls ಮಿಷನರಿ ಮೇಲೆ ಐಟಿ ದಾಳಿ
-
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯ ಆರಂಭ
-
ಲಾಕ್ಡೌನ್ ನಂತರ ಮೊದಲ ಬಾರಿಗೆ ‘ಹೌಸ್ಫುಲ್’ ಆದ ಮಂಗಳೂರಿನ ಥಿಯೇಟರ್, ಮಲ್ಟಿಪ್ಲೆಕ್ಸ್ಗಳು
-
ಕೊರೊನಾ ಲಸಿಕೆ ವಿಚಾರದಲ್ಲೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವ ಸಂಗತಿ
-
ಇವರ ಮಧ್ಯ ಕುಳಿತುಕೊಳ್ಳಲು ಕೊರೋನಾಕ್ಕೂ ಜಾಗ ಇಲ್ಲ….!!
You must be logged in to post a comment Login