KARNATAKA
ದಾವಣಗೆರೆ :ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕವ ಗ್ರಾಮ ಬಳಿ ಸಂಭವಿಸಿದೆ.
ದಾವಣಗೆರೆ : ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕವ ಗ್ರಾಮ ಬಳಿ ಸಂಭವಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಮಳಲಿ ಗ್ರಾಮದ ಮಂಜುನಾಥ ಹಾಗೂ ಮಲ್ಲಿಕಾರ್ಜುನ್ ಮೇಲೆ ಚಿರತೆ ದಾಳಿಯಿಂದ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾತ್ರಿ ವೇಳೆ ಕೆಲಸ ಮುಗಿಸಿ ತಮ್ಮ ಊರಿಗೆ ವಾಪಸ್ ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಚಿರತೆ ಇವರ ಮೇಲೆರಗಿದೆ ದಾಳಿಯಿಂದಾಗಿ ಭಯಭೀತರಾದ ಮಲ್ಲಿಕಾರ್ಜುನ ಹಾಗೂ ಮಂಜುನಾಥ ಓಡಿ ಹೋಗಿ ತಪ್ಪಿಸಿಕೊಂಡಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
You must be logged in to post a comment Login