BELTHANGADI
ಹಟ್ಟಿಯಲ್ಲಿದ್ದ ದನ ಕೊಂದು ತಿಂದ ಚಿರತೆ….!!
ಬೆಳ್ತಂಗಡಿ ಎಪ್ರಿಲ್ 18: ಹಟ್ಟಿಗೆ ನುಗ್ಗಿದ ಚಿರತೆಯೊಂದು ದನವನ್ನು ಕೊಂದು ತಿಂದು ಹಾಕಿದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ತ್ರೇಸ್ಯಾಮ್ಮರ ಮನೆಯ ಸಮೀಪದ ಹಟ್ಟಿಯಲ್ಲಿದ್ದ ದನವನ್ನು ರಾತ್ರಿಯ ವೇಳೆ ಚಿರತೆ ಕೊಂದು ತಿಂದಿದೆ. ತ್ರೇಸ್ಯಾಮ್ಮ ಅವರ ಮನೆ ಅರಣ್ಯದ ಸಮೀಪವೇ ಇದೆ. ಆಶಾ ಕಾರ್ಯಕರ್ತೆಯಾಗಿರುವ ಇವರು ಅತಿಸಣ್ಣ ಕೃಷಿಕರು ಆಗಿದ್ದು, ಹೈನುಗಾರಿಯೇ ಇವರಿಗೆ ಜೀವನೋಪಾಯವಾಗಿದೆ.
ನೇರ್ತನೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದೆ. ಕೃಷಿಕರು ಆತಂಕದಲ್ಲಿಯೇ ಬದುಕಬೇಕಾದ ಸ್ಥಿತಿ ಎದುರಾಗಿದೆ ಎಂದು ಇಲ್ಲಿನ ಜನರು ಮಾಹಿತಿ ನೀಡಿದ್ದಾರೆ.
You must be logged in to post a comment Login