KARNATAKA
ಗ್ಯಾಸ್ ಸಿಲಿಂಡರ್ ಸಿಡಿದು ದಂಪತಿ ಮೃತ್ಯು..!
ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ: ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು.
ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು.
ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಗಿರೀಶ್ ಹಾಗೂ ನಂದಿನಿ ಮೃತ ದಂಪತಿಯಾಗಿದ್ದಾರೆ.
ಸಿಲಿಂಡರ್ ಸ್ಪೋಟದಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
You must be logged in to post a comment Login