Connect with us

    LATEST NEWS

    ಮೂಡಬಿದಿರೆ – ಸಿಡಿಲು ಬಡಿದು ಇಬ್ಬರು ಸಾವು

    ಮೂಡುಬಿದಿರೆ: ಇಂದು ಸಂಜೆ ಸುರಿದ ಗುಡುಗು ಸಹಿತ ಭಾರೀ ಮಳೆ ಸಂದರ್ಭ ಸಿಡಿಲು ಬಡಿದು ಇಬ್ಬರು ಸಾವನಪ್ಪಿರುವ ಘಟನೆ ಮೂಡಬಿದಿರೆಯ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಅರ್ಬಿ ಪ್ರದೇಶದಲ್ಲಿ ನಡೆದಿದೆ.,


    ಮೃತರನ್ನು ಶೆಡ್ ಒಂದರಲ್ಲಿದ್ದ ಸ್ಥಳೀಯ ಕಾರ್ಮಿಕರಾದ ಯಶವಂತ್(25), ಮಣಿಪ್ರಸಾದ್(25) ಎಂದು ಗುರುತಿಸಲಾಗಿದ್ದು, ಇನ್ನು ಇದೇ ಪರಿಸರದಲ್ಲಿದ್ದ ಮೂವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಗಣೇಶ್, ಸಂದೀಪ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಸಹಿತ ಗ್ರಾಮಾಂತರ ಪರಿಸರದಲ್ಲಿ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply