Connect with us

    LATEST NEWS

    ಮಾವಿನ ತೋಟದಲ್ಲಿ ಆಟ ಆಡುತ್ತಿದ್ದ ಮಕ್ಕಳಿಗೆ ಬಡಿದ ಸಿಡಿಲು – ನಾಲ್ಕು ಮಕ್ಕಳ ಧಾರುಣ ಸಾವು…!!

    ಸಾಹೀಬ್‌ಗಂಜ್ ಮೇ 01: ಮಾವಿನ ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಸಿಡಿಲು ಬಡಿದ ಕಾರಣ ನಾಲ್ಕು ಮಕ್ಕಳು ಸಾವನಪ್ಪಿದ ಘಟನೆ ಜಾರ್ಖಂಡ್‌ನ ಸಾಹೀಬ್‌ಗಂಜ್ ಜಿಲ್ಲೆಯ ರಾಧಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಟೊಲಾ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.


    ಮೃತ ಮಕ್ಕಳೆಲ್ಲ 9ರಿಂದ 12ರ ವಯೋಮಾನದವರಾಗಿದ್ದಾರೆ. ಮೃತರಲ್ಲಿ ಹುಮಾಯೂನ್ ಶೇಕ್ ಎನ್ನುವರ 12 ವರ್ಷದ ಮಗಳು, 9 ವರ್ಷದ ಮಗ ಹಾಗೂ ಮೆಹಬೂಬ್ ಶೇಕ್ ಎನ್ನುವರ 10 ವರ್ಷದ ಮಗ ಮತ್ತು ಅಶ್ರಫುಲ್ ಶೇಕ್ ಎನ್ನುವರ 9 ವರ್ಷದ ಮಗ ಸೇರಿದ್ದಾರೆ.

    ಈ ಬಾಲಕರು ರಜೆ ಪ್ರಯುಕ್ತ ಗ್ರಾಮದ ಸನಿಹದ ಮಾವಿನ ತೋಟವೊಂದರ ಬಳಿ ಆಟವಾಡುತ್ತಿದ್ದರು. ಈ ವೇಳೆ ಮಳೆ ಬರುವ ಮುನ್ಸೂಚನೆ ಅರಿತು ಮಾವಿನ ಗಿಡದ ಕೆಳಗೆ ಆಶ್ರಯ ಪಡೆಯಲು ಹೋಗಿದ್ದರು. ಆಗ ಸಿಡಿಲು ಬಡಿದು ನಾಲ್ವರು ಬಾಲಕರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ಎಸ್‌ಪಿ ಅನುರಂಜನ್ ತಿಳಿಸಿದ್ದಾರೆ. ಈ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು, ಮೃತ ಬಾಲಕರ ಪಾಲಕರಿಗೆ ಸಾಂತ್ವಾನ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply