LATEST NEWS
ಸ್ನಾನಕ್ಕೆ ತೆರಳಿದ್ದ ವೇಳೆ ಸಿಡಿಲಾಘಾತಕ್ಕೆ ವಿಧ್ಯಾರ್ಥಿ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ರಕ್ಷಿತ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಇವರು ಶಿರ್ವ ಎಂಎಸ್ಆರ್ ಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
You must be logged in to post a comment Login