Connect with us

    KARNATAKA

    ಗದ್ದೆಯಲ್ಲಿ ನಾಟಿ ಮಾಡುವಾಗ ಸಿಡಿಲಾಘಾತ, 15 ಮಂದಿಗೆ ಗಾಯ, ಓರ್ವ ಮಹಿಳೆ ಗಂಭೀರ..!

    ಹಾಸನ : ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಗಾಯಗೊಂಡು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

    ಲತಾ (35) , ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಮಂಜುಳ (45), ಪುಷ್ಪ (35) ಭಾಗ್ಯ (45), ಶಾರದಮ್ಮ (55), ಜಯಂತಿ (55) ಗಾಯತರಮ್ಮ (45), ಮಂಜುಳಮ್ಮ(60) ಸೇರಿ ಹದಿನಾರು ಮಂದಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಇದರಲ್ಲಿ ಲತಾ ಎಂಬವರ ಸ್ಥಿತಿ ಗಂಭೀರವಾಗಿದ್ದು , ಎಲ್ಲರನ್ನೂ ಸಕಲೇಶಪುರ ತಾಲೂಕಿನ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರ್ಲಗದ್ದೆ ಗ್ರಾಮದ ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು-ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply