Connect with us

    LATEST NEWS

    ಜಿಲ್ಲೆಯಲ್ಲಿ ರೂಪಾಯಿ 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ

    ಜಿಲ್ಲೆಯಲ್ಲಿ ರೂಪಾಯಿ 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ

    ಉಡುಪಿ, ಡಿಸೆಂಬರ್ 14 : ಜಿಲ್ಲೆಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಪಡೆದಿರುವ  ರೂ. 258 ಕೋಟಿ ರೂ. ಗಳ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭಗೊಂಡಿದ್ದು, ಈಗಾಗಲೇ ಕಾರ್ಕಳ ತಾಲೂಕಿನ 15 ರೈತರು ಪ್ರಯೋಜನ ಪಡೆದಿದ್ದು, ರೈತರು ತಮ್ಮ ಹೆಸರುಗಳನ್ನು ನೊಂದಾಯಿಸಲು ಇಂದಿನಿಂದ 2019 ರ ಜನವರಿ 10 ರ ವರೆಗೆ ಕಾಲಾವಕಾಶ ಇದೆ ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

     ಜಿಲ್ಲೆಯಲ್ಲಿ 2009 ರ ಏಪ್ರಿಲ್ 1 ರಂದು ಮತ್ತು ನಂತರದ ದಿನಗಳಲ್ಲಿ ಮಂಜೂರಾದ ಬೆಳೆಸಾಲಗಳು ಮತ್ತು 2017 ರ ಡಿಸೆಂಬರ್ ಅಂತ್ಯದ ವರೆಗೆ ಬಾಕಿ ಇರುವ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೂ.1 ಲಕ್ಷ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಪಡೆದ ರೂ.2 ಲಕ್ಷ ದವರೆಗಿನ ಸಾಲಗಳು ಈ ಬೆಳೆ ಸಾಲ ಮನ್ನಾ ಯೋಜನೆಗೆ ಒಳಪಡಲಿದ್ದು, ಈಗಾಗಲೇ ಸಾಲ ಪಾವತಿ ಮಾಡಿರುವ ರೈತರಿಗೆ ಅವರ ಉಳಿತಾಯ ಖಾತೆಗಳಿಗೆ ಯೋಜನೆಯ ಹಣ ಜಮೆ ಆಗಲಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.

    ಉಡುಪಿ ಜಿಲ್ಲೆಯಲ್ಲಿ 24232 ಮಂದಿ ರೈತರು ಸಹಕರಿ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಡಿಸಿಸಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿದ್ದು, 4648 ಮಂದಿ ರೈತರು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿದ್ದು, ಜಿಲ್ಲೆಯ ರೈತರಿಗೆ ಒಟ್ಟು 258 ಕೋಟಿ ರೂ. ಗಳ ಸಾಲ ಮನ್ನಾ ಯೋಜನೆಯ ನೆರವು ದೊರೆಯಲಿದೆ, ಸಹಕಾರಿ ಬ್ಯಾಂಕ್ ಗಳಲ್ಲಿ ಈಗಾಗಲೇ ಬೆಳೆ ಸಾಲ ಮನ್ನಾ ಯೋಜನೆಗೆ ಬಹುತೇಕ ರೈತರ ನೊಂದಾವಣೆ ಮುಗಿದಿದ್ದು, ವಾಣಿಜ್ಯ ಬ್ಯಾಂಕ್‍ಗಳಲ್ಲಿ ನೊಂದಣಿ ನಡೆಯಲಿದೆ, ಸಾಲ ಮನ್ನಾ ಕುರಿತಂತೆ ನೊಂದಾಯಿಸಲು ಸಾಕಷ್ಟು ಕಾಲಾವಕಾಶವಿದ್ದು, ಪ್ರತಿ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್‍ನ ನಕಲು ಪ್ರತಿ ಮತ್ತು ಸಾಲ ಪಡೆದ ಸರ್ವೆ ನಂಬರಿನ ಮಾಹಿತಿಯನ್ನು ಸ್ವಯಂ ದೃಢೀಕರಿಸಿ, ತಾವು ಸಾಲ ಪಡೆದ ಬ್ಯಾಂಕ್ ಗಳಿಗೆ ಸಲ್ಲಿಸಬೇಕು, ಸಹಕಾರಿ ಬ್ಯಾಂಕ್‍ಗಳಲ್ಲಿ ಬೆಳೆಸಾಲ ಮನ್ನಾ ಪಡೆದ ಫಲಾನುಭವಿಗಳು ವಾಣಿಜ್ಯ ಬ್ಯಾಂಕ್ ಬೆಳೆ ಸಾಲ ಮನ್ನಾ ಯೋಜನೆಯಡಿ ಅರ್ಹರಿರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply