Connect with us

    KARNATAKA

    ಮುಂದಿನ ವಾರದಿಂದ 5 ಹಂತಗಳಲ್ಲಿ ಅನ್ ಲಾಕ್ ಗೆ ಚಿಂತನೆ – ಕಂದಾಯ ಸಚಿವ ಆರ್ .ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳ ಬಗ್ಗೆ ಸಭೆ ಆರಂಭವಾಗಿದ್ದು, ಸದ್ಯ ರಾಜ್ಯದಲ್ಲಿ ಮುಂದಿನ ವಾರದಿಂದ ಅನ್‌ಲಾಕ್ ಪ್ರಕ್ರಿಯೆ ನಡೆಸುವ ಬಗ್ಗೆ ಕಂದಾಯ ಸಚಿವ ಆರ್ .ಅಶೋಕ್ ಸುಳಿವು ನೀಡಿದ್ದು, ನಾಲ್ಕರಿಂದ ಐದು ಹಂತಗಳಲ್ಲಿ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.


    ಮೊದಲನೆಯದಾಗಿ ಅಗತ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿದ ಸಮಯವನ್ನು 12 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ. ವ್ಯಾಯಾಮ ಮತ್ತು ವಾಯುವಿಹಾರಕ್ಕಾಗಿ ಉದ್ಯಾನಗಳಿಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ಕೂಡ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ. ಹಂತ ಹಂತವಾಗಿ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ. ಒಮ್ಮೆಲೆಯೇ ತೆರವುಗೊಳಿಸಿದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುವ ಅಪಾಯ ಇರಲಿದೆ ಎಂದರು.


    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನ್‌ಲಾಕ್ ಪ್ರಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 2ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಜನಜೀವನವು ಸಾಮಾನ್ಯ ಸ್ಥಿತಿಗೆ ಬರಬೇಕಾದರೇ ಪ್ರಕರಣಗಳ ಸಂಖ್ಯೆ 500ಕ್ಕೆ ಇಳಿಕೆಯಾಗಬೇಕು. ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸಿದ ಬಳಿಕ ಸೋಂಕು ದೃಢ ಪ್ರಮಾಣವನ್ನು ವಿಶ್ಲೇಷಿಸಿ, ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ವಿವರಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply