Connect with us

LATEST NEWS

ಲೋಕಾಯುಕ್ತ ದಾಳಿ ನಡೆಸದಂತೆ ಡಿಲೀಂಗ್ ಗೆ ಬಂದು ಸಿಕ್ಕಿಹಾಕಿಕೊಂಡ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ

ಮಂಗಳೂರು ಮೇ 30: ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ಎಂಬಾತ ಲೋಕಾಯುಕ್ತ ಕಚೇರಿಗೆ ಬಂದು ಲೋಕಾಯಕ್ತ ಪೊಲೀಸ್ ನಿರೀಕ್ಷಕರಿಗೆ ನನ್ನ ಮೇಲೆ ಯಾವುದೇ ರೀತಿ ದಾಳಿ ನಡೆಸದಂತೆ 3 ತಿಂಗಳಿಗೆ 25 ಸಾವಿರ ಹಣ ಕೊಡವುದಾಗಿ ಹೇಳಿ ಸಿಕ್ಕಿಹಾಕಿಕೊಂಡ ಅಪರೂಪದ ಘಟನೆ ನಡೆದಿದೆ. ಸದ್ಯ ಆರೋಪಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ಅರೆಸ್ಟ್ ಮಾಡಿ ತನಿಖೆ ನಡೆಸುತ್ತಿದ್ದಾರೆ


ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಸಮಯ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಪ್ರವೀಣ್ ನಾಯ್ಕ್ ಮಾಲಿಕರು, ಪ್ರಶಾಂತ್ ಆಯಿಲ್ ಇಂಡಸ್ಟ್ರಿಸ್, ಕೋಟೆಕಣಿ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದು ಪೊಲೀಸ್ ನಿರೀಕ್ಷಕರ ಜೊತೆ ಮಾತುಕತೆ ನಡೆಸಲಿಕ್ಕೆ ಇದೆ ಎಂದು ಠಾಣೆಯ ಸಿಬ್ಬಂದಿ ಹತ್ತಿರ ಹೇಳಿದ್ದಾರೆ.

ಬಳಿಕ ಸಿಬ್ಬಂದಿ ಅವರನ್ನು ಪೊಲೀಸ್ ನಿರೀಕ್ಷಕರ ಹತ್ತಿರ ಕಳುಹಿಸಿದ್ದಾರೆ. ಈ ವೇಳೆ ಆರೋಪಿ ಗಜೇಂದ್ರ ಮತ್ತು ಪ್ರವೀಣ್ ನಾಯ್ಕ್ ಅವರು ಮಾತನಾಡುತ್ತಾ, ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿ ತಾನು 3 ತಿಂಗಳಿಗೊಮ್ಮೆ 25,000/- ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಪಿರ್ಯಾದಿದಾರರಿಗೆ ಲಂಚದ ಅಮಿಷ ಒಡ್ಡಿದ್ದಾರೆ.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರು ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಈ ದಿನ ದಿನಾಂಕ 30.05.2025 ರಂದು ಮಂಗಳೂರು ಲೋಕಾಯುಕ್ತ ಠಾಣೆಯ ಠಾಣಾಧಿಕಾರಿಯವರಿಗೆ ಲಂಚ ಹಣ ನೀಡುವುದಾಗಿ ಆಮೀಷ ಒಡ್ಡಿದ ಸರಕಾರಿ ಅಧಿಕಾರಿಯಾದ ಶ್ರೀ ಗಜೇಂದ್ರ ವಿ ಎಡಕೆ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರು ರವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಕಾನೂನು ಕ್ರಮ ಕೈಗೊಂಡಿರುತ್ತಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *