Connect with us

LATEST NEWS

2000ರೂಪಾಯಿ ಲಂಚ ಪಡೆಯಲು ಹೋಗಿ ಲೋಕಾಯುಕ್ತ ಬಲೆಗೆ ಬಿದ್ದ ಲೈನ್ ಮ್ಯಾನ್

ಬೈಂದೂರು ಜುಲೈ 04: ಮರ ಕಡಿಯಲು ವಿದ್ಯುತ್ ಕಂಬದ ಸಂಪರ್ಕ ತೆಗೆಯಲು ಲಂಚಕೇಳಿದ ಲೈನ್ ಮೆನ್ ನನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗ ಹಿಡಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬೈಂದೂರು ಮೆಸ್ಕಾಂ ಲೈನ್ ಮೆನ್ ರಮೇಶ್ ಬಡಿಗೇರ ಎಂದು ಗುರುತಿಸಲಾಗಿದೆ.


ಮರ ಕಡಿಯುವ ಸಂದರ್ಭ ಲೈನ್ ಕಟ್ ಮಾಡಿಕೊಡುವಂತೆ ಲೈನ್ ಮ್ಯಾನ್ ರಮೇಶ್ ಬಡಿಗೇರ ಅವರಿಗೆ ಬೈಂದೂರಿನ ಕುಸುಮಾ ಎನ್ನುವವರು ಮನವಿ ಮಾಡಿದ್ದರು. ಈ ವೇಳೆ ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ಆಗಿರುವ ರಮೇಶ್ ಬಡಿಗೇರ ಅವರು 2000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ಒಪ್ಪದ ಮನೆಯವರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಲೈನ್ ಮ್ಯಾನ್ ನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ಪ್ರಕಾಶ್, ಇನ್ಸ್ಪೆಕ್ಟರ್ ಜಯರಾಮ್ ಗೌಡ ತಂಡದ ಈ ಕಾರ್ಯಾಚರಣೆ ನಡೆಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *