Connect with us

    LATEST NEWS

    ಮರ ಕಡಿಯಲು ಅನುಮತಿಗೆ ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಬೈಂದೂರು ಉಪವಲಯ ಅರಣ್ಯ ಅಧಿಕಾರಿ

    ಉಡುಪಿ ಜೂನ್ 21: ಮರ ಕಡಿಯಲು ಅನುಮತಿಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ಅರಣ್ಯ ವೀಕ್ಷಕ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

    ಬೈಂದೂರು ವಲಯದ ಉಪವಲಯ ಅರಣ್ಯಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿ. ಬೈಂದೂರು ಅರಣ್ಯ ವೀಕ್ಷಕ ವಿನಾಯಕ ದಾಳಿ ವೇಳೆ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿರೂರಿನ ಮುಹಮ್ಮದ್ ಅನ್ವರ್ ಹಸನ್ ಎಂಬವರು ತನ್ನ ಪಟ್ಟ ಸ್ಥಳದಲ್ಲಿರುವ ಹಲಸಿನ ಮರವನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡುವ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಉಪವಲಯ ಅರಣ್ಯಧಿಕಾರಿ ಅನುಮತಿ ನೀಡಬೇಕಾದರೆ 4000 ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಒಪ್ಪದ ಅನ್ವರ್, ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ ಲೋಕಾಯುಕ್ತ ಪೊಲೀಸರು ಕಾರ್ಯಾ ಚರಣೆ ನಡೆಸಿ, ಅನ್ವರ್ ಅವರಲ್ಲಿ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯನ್ನು ಬಂಧಿಸಿದರು ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply