LATEST NEWS
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು
ಉಡುಪಿ ಎಪ್ರಿಲ್ 21:ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ-ಮಂಗಳೂರು ರಸ್ತೆಯಲ್ಲಿ ಮೈದಾಹಿಟ್ಟು ಸಾಗಿಸುತ್ತಿದ್ದ ಲಾರಿ ಕೆಟ್ಟು ನಿಂತಿದ್ದು ಇದಕ್ಕೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಬಂದು ಢಿಕ್ಕಿಯಾಗಿದೆ. ಈ ವೇಳೆ ಲಾರಿ ರಿಪೇರಿ ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಚಾಲಕ ಮಹಂತೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೊಂದು ಲಾರಿ ಚಾಲಕ ಸಹ ಗಾಯಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಕೆಟ್ಟು ನಿಂತ ಲಾರಿ ಡಿವೈಡರ್ ದಾಟಿ ರಸ್ತೆಯ ಇನ್ನೊಂದು ಬದಿಗೆ ಉರುಳಿದೆ. ಢಿಕ್ಕಿ ಹೊಡೆದ ಲಾರಿ ಸಹ ಪಲ್ಟಿಯಾಗಿದೆ.ಘಟನೆ ಕುರಿತಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login