Connect with us

    DAKSHINA KANNADA

    ಚಾರ್ಮಾಡಿಯಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ-ಇಬ್ಬರ ಜೀವ ಉಳಿಸಿತು ಮರ..!

    ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

    ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

    ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

    ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಉರುಳಿ ಬಿದ್ದು ಈ ಘಟನೆ ನಡೆದಿದೆ.

    ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿತ್ತು.

    ಪ್ರಪಾತದಲ್ಲಿ ಬೀಳಲಿದ್ದ ಇಬ್ಬರ ಜೀವ ಮರ ಉಳಿಸಿದೆ. ಕೂಡಲೇ ಮಾಹಿತಿ ಪಡೆದ ಸ್ಥಳಿಯರು ಲಾರಿ ಚಾಲಕ-ಕ್ಲೀನರ್ ನನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply